ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ

CM Siddaramaiah Nachrichten

ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ
Prajwal RevannaHD DevegowdaLoksabha Elections 2024
  • 📰 Zee News
  • ⏱ Reading Time:
  • 50 sec. here
  • 10 min. at publisher
  • 📊 Quality Score:
  • News: 51%
  • Publisher: 63%

ನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.

ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ಅವಿನಾಭಾವ ಸಂಬಂಧವಿದೆ ಎನ್ನುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರತಿಭಟನೆಯಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟರೇ?ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು..

ಅವರು ಇಂದು ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ಪ್ರಜಾಧ್ವನಿ-02 ಲೋಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜ್ವಲ್ ರೇವಣ್ಣ 5 ವರ್ಷ ಸಂಸದರಾಗಿ ಏನಾದರೂ ಮಾಡಿದ್ದಾರೆಯೇ? ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು ನೀಡದೆ ಅನ್ಯಾಯ ಮಾಡಿದಾಗಲೂ ಏನೂ ಮಾತನಾಡಲಿಲ್ಲ. ಕರ್ನಾಟಕದಿಂದ ಕೇಂದ್ರಕ್ಕೆ ಕೊಡುವ ತೆರಿಗೆ 4.30 ಲಕ್ಷ ಕೋಟಿ ರೂ.ಗಳು. ನಮಗೆ ವಾಪಸ್ಸು ಬರುವುದು 55 ಕೋಟಿ ರೂ.ಗಳು ಮಾತ್ರ. ಇದು ಅನ್ಯಾಯವಲ್ಲವೇ? ಎಂದರು.ಬಿಜೆಪಿಯಿಂದ 25 ಜನ ಸಂಸದರಾಗಿದ್ದರು. ಈಗ 27 ಜನರಾಗಿದ್ದಾರೆ. ಇವರು ಯಾರು ಬಾಯಿ ಬಿಡಲಿಲ್ಲ.

ವಾಚಾಮಗೋಚರವಾಗಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದ ದೇವೇಗೌಡರು ಈಗ ಅವಿನಾಭಾವ ಸಂಬಂಧವಿದೆ ಎನ್ನುತ್ತಿದ್ದಾರೆ. ಈ ಅನಿರೀಕ್ಷಿತ ಪ್ರೀತಿಯ ಬಗ್ಗೆ ಜನ ವಿಚಾರ ಮಾಡಬೇಕು. ಸ್ವಾರ್ಥಕ್ಕಾಗಿ, ಕುಟುಂಬ ರಾಜಕಾರಣಕ್ಕಾಗಿ ಈಗ ನರೇಂದ್ರ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಬಡವರ ಕಷ್ಟ ಸುಖ, ಸಾಮಾನ್ಯ ಜನರ, ರೈತರಿಗಾಗಿ ಸೇರಿಲ್ಲ. ಕೇವಲ ಸ್ವಾರ್ಥಕ್ಕಾಗಿ ಸೇರಿಕೊಂಡಿದ್ದಾರೆ. ಅಳಿಯ, ಮಗ, ಮೊಮ್ಮಗನನ್ನು ನಿಲ್ಲಿಸಿದ್ದಾರೆ. ಕೋಲಾರ ಮೀಸಲು ಸ್ಥಾನವಾಗಿರುವುದರಿಂದ ಬಿಟ್ಟಿದ್ದಾರೆ ಅಷ್ಟೇ ಎಂದರು.ಎತ್ತಿನಹೊಳೆ ಯೋಜನೆಯನ್ನು ಹೆಚ್.ಡಿ ಕುಮಾರಸ್ವಾಮಿ ವಿರೋಧಿಸಿದ್ದರು. ಜನರ ದಾರಿ ತಪ್ಪಿಸಿ ಅಧಿಕಾರ ಮಾಡಿದರು.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Prajwal Revanna HD Devegowda Loksabha Elections 2024 Karnataka Lok Sabha Elections 2024 Karnataka Lok Sabha News ಸಿಎಂ ಸಿದ್ದರಾಮಯ್ಯ ಪ್ರಜ್ವಲ್‌ ರೇವಣ್ಣ ಹೆಚ್‌ಡಿ ದೇವೇಗೌಡ

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
Weiterlesen »

ಶಿಷ್ಯನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ.!ಶಿಷ್ಯನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ.!ಜನತಾ ನ್ಯಾಯಾಲಯ ಕೊಡುವ ಶಿಕ್ಷೆ ಕಾನೂನಿಗಿಂತ ಕೊಡುವ ದೊಡ್ಡ ಶಿಕ್ಷಯಾಗಿದೆ. ನೀವು ಎನ್‌ಡಿಎ ಅಭ್ಯರ್ಥಿಯನ್ನು ಸೋಲಿಸಿ ರಕ್ಷಾರಾಮಯ್ಯ ಅವರನ್ನು‌ ಗೆಲ್ಲಿಸಿದರೆ ಅದೇ ಅವರಿಗೆ ದೊಡ್ಡ ಶಿಕ್ಷೆಯಾಗುತ್ತೆ. ಎನ್‌ಡಿಎ ಭ್ರಷ್ಟರು ಲೋಕಸಭೆ ಹೋದ್ರೆ ಇನ್ನೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತೆ.
Weiterlesen »

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
Weiterlesen »

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Weiterlesen »

ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
Weiterlesen »

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Weiterlesen »



Render Time: 2025-02-26 19:59:28